ADVERTISEMENT

ರಾಷ್ಟ್ರಪತಿ ಭವನದಲ್ಲಿ ಹೋಳಿ ಕೂಟ ಇರುವುದಿಲ್ಲ: ರಾಷ್ಟ್ರಪತಿ ಟ್ವೀಟ್ 

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 13:43 IST
Last Updated 4 ಮಾರ್ಚ್ 2020, 13:43 IST
 ರಾಮನಾಥ ಕೋವಿಂದ್
ರಾಮನಾಥ ಕೋವಿಂದ್   

ನವದೆಹಲಿ: ಕೋವಿಡ್ 19 ವೈರಸ್ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹೋಳಿ ಕೂಟ ಇರುವುದಿಲ್ಲ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.

ಕೋವಿಡ್ 19 ಕೊರೊನಾ ವೈರಸ್ ಸೋಂಕು ಹರಡದಂತೆ ನಾವು ಜಾಗ್ರತೆ ವಹಿಸಬೇಕು. ಮುಂಜಾಗ್ರತಾ ಕ್ರಮವಾಗಿ ಸಾಂಪ್ರದಾಯಿಕ ಹೋಳಿ ಕೂಟವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸುವುದಿಲ್ಲ ಎಂದು ಕೋವಿಂದ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.