ನವದೆಹಲಿ: ಕಳೆದ ಆರು ತಿಂಗಳಲ್ಲಿ ಚೀನಾ–ಭಾರತ ಗಡಿಯ ಮೂಲಕ ಯಾವುದೇ ನುಸುಳಿಕೆ ಪ್ರಕರಣಗಳು ನಡೆದಿಲ್ಲ ಎಂದು ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಇದೇ ವೇಳೆ,ಭಾರತ ಮತ್ತು ಪಾಕಿಸ್ತಾನದ ಭಾಗದಲ್ಲಿ 47 ಬಾರಿ ಒಳಸುಳುವಿಕೆಯ ಪ್ರಯತ್ನಗಳು ನಡೆದಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಲಿಖಿತ ಹೇಳಿಕೆಯಲ್ಲಿ ತಿಳಿಸಿದೆ.ಪಾಕಿಸ್ತಾನಿ ಉಗ್ರರುಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದೊಳಗೆ 594 ಬಾರಿ ನುಸುಳಲು ಪ್ರಯತ್ನಿಸಿರುವುದು ವರದಿಯಾಗಿದೆ. ಇದರಲ್ಲಿ 312 ಬಾರಿ ಯಶಸ್ವಿಯಾಗಿದ್ದಾರೆ ಎಂದೂ ರಾಜ್ಯಸಭೆಗೆ ಮಾಹಿತಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮೂರು ತಿಂಗಳಲ್ಲಿ ಭದ್ರತಾ ಪಡೆಯವರು 562 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ ಅವಧಿಯಲ್ಲಿ 46 ಉಗ್ರರನ್ನು ಬಂಧಿಸಿದ್ದಾರೆ ಎಂದು ಮತ್ತೊಬ್ಬ ಗೃಹ ಖಾತೆಯ ರಾಜ್ಯ ಸಚಿವ ಜಿ. ಕೃಷ್ಣಾರೆಡ್ಡಿ ರಾಜ್ಯಸಭೆಗೆ ತಿಳಿಸಿದ್ದಾರೆ.
2018ರಿಂದ ಸೆಪ್ಟೆಂಬರ್ 8, 2020ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 76 ಸೇನಾ ಯೋಧರು ಹತ್ಯೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.