ADVERTISEMENT

ಅಯೋಧ್ಯೆ ವಿಚಾರಣೆ ನೇರ ಪ್ರಸಾರಕ್ಕೆ ಅವಕಾಶ ಇಲ್ಲ: ಸುಪ್ರೀಂಕೋರ್ಟ್‌

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 5:47 IST
Last Updated 6 ಆಗಸ್ಟ್ 2019, 5:47 IST
   

ನವದೆಹಲಿ: ರಾಮ ಜನ್ಮಭೂಮಿ–ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ವಿಚಾರಣೆಯ ನೇರ ಪ್ರಸಾರ ಅಥವಾ ಧ್ವನಿ ಮುದ್ರಣಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಪ್ರಕರಣದ ಪ್ರತಿದಿನದ ವಿಚಾರಣೆ ಇಂದಿನಿಂದ ಆರಂಭವಾಗಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರಿರುವ ನ್ಯಾಯಪೀಠವು ವಿಚಾರಣೆ ಆರಂಭವಾದ ತಕ್ಷಣ ನೇರ ಪ್ರಸಾರ ಕುರಿತು ಆದೇಶ ನೀಡಿತು.

ADVERTISEMENT

ನ್ಯಾಯಾಲಯದ ಹೊರಗೆ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವ ಪ್ರಯತ್ನ ಫಲ ನೀಡದ ಹಿನ್ನೆಲೆಯಲ್ಲಿ ಪ್ರತಿದಿನ ವಿಚಾರಣೆ ನಡೆಸಲು ಆಗಸ್ಟ್‌ 2ರಂದು ಕೋರ್ಟ್‌ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.