ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಮಂಗಳವಾರದ ವರೆಗೆ ಒಂದೇ ಒಂದು ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದ್ದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ರಾತ್ರಿಯಿಂದಲೇ ಲಾಕ್ ಡೌನ್ ಘೋಷಣೆ ಮಾಡಿದೆ. ಲಾಕ್ಡೌನ್ ಘೋಷಣೆಯಾಗುವುದಕ್ಕೂ ಮೊದಲು 31 ಇದ್ದ ಸೋಂಕು ಪ್ರಕರಣ, ಲಾಕ್ ಡೌನ್ ಆಗಿ 24 ಗಂಟೆ ಕಳೆದರೂ 31ರಲ್ಲೇ ಇದೆ.
ಈ ಪೈಕಿ ಆರು ಮಂದಿ ಈಗಾಗಲೇ ಗುಣಮುಖರಾಗಿದ್ದು, ಅವರು ಬಿಡುಗಡೆಯಾಗಿದ್ದಾರೆ. 11 ಇಟಲಿ ಪ್ರವಾಸಿಗರನ್ನು ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೂ ಗುಣವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.