ನವದೆಹಲಿ: ಸರ್ಕಾರವು ನಮ್ಮನ್ನು ಹೆದರಿಸಲು ಯತ್ನಿಸುತ್ತಿದೆ. ಆದರೆ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆದರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
‘ಅವರು ಬೇಕಾದದ್ದು ಮಾಡಲಿ. ದೇಶ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಸಾಮರಸ್ಯವನ್ನು ಕಾಪಾಡಲು ಏನು ಮಾಡಬೇಕೋ ಅದನ್ನೆಲ್ಲಾ ನಾವು ಮಾಡುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
****
ಸಂಸತ್ ಅಧಿವೇಶನದ ಮಧ್ಯೆಯೇ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಮೂಲಕ ‘ಮೋದಿಶಾಹಿ’ಯು ಇನ್ನಷ್ಟು ಕೆಳಮಟ್ಟಕ್ಕೆ ಇಳಿದಿದೆ
-ಜೈರಾಮ್ ರಮೇಶ್, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ
–––
ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಪಲಾಯನದ ಬದಲು ಕಾನೂನನ್ನು ಪಾಲಿಸಲಿ
- ಪೀಯೂಷ್ ಗೋಯಲ್, ಕೇಂದ್ರ ಸಚಿವ
–––
ನಾನೇನು ಕಾನೂನಿನಿಂದ ದೂರ ಓಡುತ್ತಿಲ್ಲ. ಮಧ್ಯಾಹ್ನ 12.30ಕ್ಕೆ ಇ.ಡಿ ಮುಂದೆ ಹಾಜರಾಗುತ್ತಿದ್ದೇನೆ. ನಮ್ಮನ್ನು ಬೆದರಿಸಲು ಯತ್ನಿಸಲಾಗುತ್ತಿದೆ. ಆದರೆ, ನಾವು ಬಗ್ಗುವವರಲ್ಲ
-ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.