ಅಹಮದಾಬಾದ್: ನಿತ್ಯಾನಂದ ಆಶ್ರಮಕ್ಕೆ ಗುತ್ತಿಗೆ ಆಧಾರದ ಮೇಲೆ ಜಾಗ ನೀಡಿದ್ದಕ್ಕಾಗಿ ಡಿಪಿಎಸ್(ಪೂರ್ವ) ಶಾಲೆಗೆ ಅಹಮದಾಬಾದ್ ಜಿಲ್ಲಾಡಳಿತ ನೋಟಿಸ್ ನೀಡಿದೆ.
ಅಹಮದಾಬಾದ್ ಜಿಲ್ಲೆಯ ಹಿರಾಪುರ ಗ್ರಾಮದಲ್ಲಿರುವ ಶಾಲಾ ಆವರಣವನ್ನು ನಿತ್ಯಾನಂದ ಆಶ್ರಮಕ್ಕೆ ನೀಡಲಾಗಿದೆ. ರಾಜ್ಯ ಶಿಕ್ಷಣ ಇಲಾಖೆಯಿಂದ ಪರವಾನಗಿ ಪಡೆಯುವಾಗ ಈ ಜಾಗಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಸಲ್ಲಿಸಿರುವ ದಾಖಲೆಗಳಲ್ಲಿಯೂ ಹಲವು ವ್ಯತ್ಯಾಸಗಳು ಕಂಡು ಬಂದಿವೆ ಎಂದು ಜಿಲ್ಲಾಧಿಕಾರಿ ಪಾಂಡೆ ಭಾನುವಾರ ತಿಳಿಸಿದ್ದಾರೆ.
ಶಾಲೆ ಇರುವ ವಾಸ್ತವ ಜಾಗ ಮತ್ತು ದಾಖಲೆಗಳಲ್ಲಿರುವ ಸರ್ವೇ ಸಂಖ್ಯೆಗಳು ವಿಭಿನ್ನವಾಗಿವೆ. ಜತೆಗೆ, ಆಶ್ರಮಕ್ಕೆ ಗುತ್ತಿಗೆ ನೀಡಿರುವ ಬಗ್ಗೆಯೂ ವಿವರ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯಿದೆ (ಆರ್ಟಿಇ) ಅಡಿಯಲ್ಲಿಯೂ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿರುವ ಕುರಿತು ವಿವರ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.