ADVERTISEMENT

ಎನ್‌ಆರ್‌ಸಿ: ಅಹವಾಲು ಮರು ಪರಿಶೀಲನೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2018, 2:48 IST
Last Updated 29 ಆಗಸ್ಟ್ 2018, 2:48 IST
   

ನವದೆಹಲಿ (ಪಿಟಿಐ): ಅಸ್ಸಾಂನಲ್ಲಿ ನಡೆಸಿದ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕರಡು ಪಟ್ಟಿಯಿಂದ ಹೊರಗಿಡಲಾದ ಅಸ್ಸಾಂನ ಶೇ 10 ರಷ್ಟು ನಾಗರಿಕರ ಅಹವಾಲು ಅರ್ಜಿಗಳ ಮರು ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶಿಸಿದೆ.

ಎನ್‌ಆರ್‌ಸಿ ಪಟ್ಟಿಯಿಂದ ಹೊರಗಿಡಲಾದವರ ಮರು ಪರಿಶೀಲನೆಯು ಕೋರ್ಟ್‌ನ ಸಮಾಧಾನಕ್ಕಾಗಿ ಮಾದರಿ ಸಮೀಕ್ಷೆಯಾಗಿದೆ. ಪಟ್ಟಿಗೆ ಸೇರಿಸುವ ತೀರ್ಮಾನವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ರಂಜನ್‌ ಗೊಗೊಯ್‌ ಮತ್ತು ಆರ್‌.ಎಫ್‌.ನಾರಿಮನ್‌ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT