ADVERTISEMENT

ನಿಗದಿತ ಆದಾಯಕ್ಕಿಂತ ₹2.96 ಕೋಟಿ ಅಧಿಕ ಆಸ್ತಿ, ಅಂಗನವಾಡಿ ಕಾರ್ಯಕರ್ತೆ ಬಂಧನ

ಪಿಟಿಐ
Published 16 ಸೆಪ್ಟೆಂಬರ್ 2021, 7:19 IST
Last Updated 16 ಸೆಪ್ಟೆಂಬರ್ 2021, 7:19 IST
,
,   

ಭುವನೇಶ್ವರ: ನಿಗದಿತ ಆಸ್ತಿಗಿಂತ ₹2.96 ಕೋಟಿ ಅಧಿಕ ಆಸ್ತಿ ಹೊಂದಿದ್ದ ಆರೋಪದ ಮೇರೆಗೆ ಒಡಿಶಾದ ಅಂಗನವಾಡಿ ಕಾರ್ಯಕರ್ತೆಯೊಬ್ಬರನ್ನು ಬಂಧಿಸಲಾಗಿದೆ.

ಭುವನೇಶ್ವರದ ಕೊರಾಡಕಾಂತ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಕಬಿತಾ ಮತನ್‌ ಅವರು ನಿಗದಿತ ಆಸ್ತಿಗಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ ದೂರುಗಳು ಬಂದ ಕಾರಣ ಅವರ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ರಾಜ್ಯದ ವಿಚಕ್ಷಣಾ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಖುರ್ದಾ, ಕೇಂದ್ರಪಾರ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ಶೋಧ ನಡೆಯಿತು. ಈ ವೇಳೆ ₹ 4 ಕೋಟಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಗಳು ಪತ್ರೆಯಾಗಿವೆ. ಈಕೆ 7 ಕಟ್ಟಡಗಳು, ಭುವನೇಶ್ವರದಲ್ಲಿನ 10 ನಿವೇಶನಗಳ ಸಹಿತ ಒಟ್ಟು 14 ನಿವೇಶನಗಳನ್ನು ಹೊಂದಿದ್ದಾರೆ. ಅವರು ಗಳಿಸಿರುವ ಆಸ್ತಿ ಅವರ ನಿಗದಿತ ಆಸ್ತಿಗಿಂತ ಶೇ 494ರಷ್ಟು ಅಧಿಕವಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಕಬಿತಾ ಮತ್ತು ಆಕೆಯ ಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಬಿತಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.