ಭುವನೇಶ್ವರ (ಒಡಿಶಾ): ಗುಜರಾತ್ನ ಸೂರತ್ನಿಂದ ಒಡಿಶಾಕ್ಕೆ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಫಲ್ಬನಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಅಪಘಾತಕ್ಕೆ ತುತ್ತಾಗಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಒಡಿಶಾದ ಗಂಜಾಮ್–ಕಂದಮಾಲ್ ಗಡಿಯಲ್ಲಿ ಬರುವ ಕಳಿಂಗಾ ಘಾಟ್ನಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಉರುಳಿ ಬಿದ್ದಿದೆ. ಗುಜರಾತ್ನ ಸೂರತ್ನಿಂದ ಒಡಿಶಾದ ಗಂಜಾಮ್ಗೆ ವಲಸೆ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು.
ಈ ಕುರಿತು ಮಾತನಾಡಿರುವ ಒಡಿಶಾದ ದಕ್ಷಿಣ ವಲಯದ ಡಿಐಜಿ, ಸತ್ಯಬಾರ್ತ ಬೋಯ್, ‘ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ,’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.