ADVERTISEMENT

ಗಣರಾಜ್ಯೋತ್ಸವದಲ್ಲಿ ಚುನಾವಣಾ ಪ್ರಚಾರ ಮಾಡಬಾರದು: ಆಯೋಗ ಸೂಚನೆ

ಪಿಟಿಐ
Published 19 ಜನವರಿ 2022, 6:48 IST
Last Updated 19 ಜನವರಿ 2022, 6:48 IST
ಚುನಾವಣಾ ಆಯೋಗದಿಂದ ಮಹತ್ವದ ಸೂಚನೆ
ಚುನಾವಣಾ ಆಯೋಗದಿಂದ ಮಹತ್ವದ ಸೂಚನೆ   

ನವದೆಹಲಿ: ಒಡಿಶಾದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ನೇತಾರರು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ ಹೇಳಿದೆ.

ಗಣರಾಜ್ಯೋತ್ಸವದ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಆದರೆ ಗಣರಾಜ್ಯೋತ್ಸವ ಆಚರಣೆ ಮತ್ತು ಸಾಂಸ್ಕೃತಿಕ ಸಭೆ, ಕಾರ್ಯಕ್ರಮ ನಡೆಸಲು ಆಯೋಗ ಯಾವುದೇ ನಿರ್ಬಂಧ ವಿಧಿಸಿಲ್ಲ.

ADVERTISEMENT

ಅಲ್ಲದೆ, ನಾಯಕರು ಮತ್ತು ಸಂಪುಟ ಸಚಿವರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕೂಡ ನಿರ್ಬಂಧವಿರುವುದಿಲ್ಲ.

ಉಳಿದಂತೆ ರಾಜಕೀಯ ಉದ್ದೇಶಕ್ಕೆ ಮತ್ತು ಚುನಾವಣೆಯ ಪ್ರಚಾರ ಕಾರ್ಯಕ್ಕೆ ಗಣರಾಜ್ಯೋತ್ಸವವನ್ನು ಬಳಸಿಕೊಳ್ಳುವಂತಿಲ್ಲ ಎಂಬ ನಿರ್ದೇಶನವನ್ನು ಆಯೋಗ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.