ಒಡಿಶಾ: ಕೊರೊನಾ ಸೋಂಕು ದೇಶದಾದ್ಯಂತ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರಿಸಿ ಮುಖ್ಯಮಂತ್ರಿನವೀನ್ ಪಟ್ನಾಯಕ್ ಆದೇಶ ಹೊರಡಿಸಿದ್ದಾರೆ.
ಇದು ದೇಶದಲ್ಲಿಯೇ ಲಾಕ್ಡೌನ್ ಮುಂದುವರಿಸಿ ಜಾರಿ ಮಾಡಿರುವ ಮೊದಲ ರಾಜ್ಯ ಒಡಿಶಾ. ಅಲ್ಲದೆ, ಕೇಂದ್ರ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹೆಚ್ಚು ಹರಡುವುದನ್ನು ತಪ್ಪಿಸಲುರೈಲು ಹಾಗೂ ವಿಮಾನ ಯಾನ ಆರಂಭ ಮಾಡದಂತೆ ಮನವಿ ಮಾಡಿದ್ದಾರೆ.ಒಡಿಶಾದಲ್ಲಿ ಈಗಾಗಲೇ ಶಿಕ್ಷಣ ಸಂಸ್ಥೆಗಳನ್ನು ಜೂನ್ 17ರವರೆಗೆ ಮುಚ್ಚುವಂತೆ ಆದೇಶಿಸಿರುವ ಪಟ್ನಾಯಕ್, ಶತಮಾನಕ್ಕೂ ಹೆಚ್ಚು ಕಾಲದ ನಂತರ ಮಾನವನಿಗೆ ಇದೊಂದು ಬೃಹತ್ ಬೆದರಿಕೆಯಾಗಿದೆ.
ಜೀವನವು ಎಂದಿಗೂ ಒಂದೇ ಆಗಿರುವುದಿಲ್ಲ ಎಂದು ಪಟ್ನಾಯಕ್ ತಿಳಿಸಿದ್ದಾರೆ.ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಕೇಂದ್ರವನ್ನು ಒತ್ತಾಯಿಸುವ ನಿರ್ಣಯಕೈಗೊಂಡಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.ಜೀವನ ಯಾವಾಗಲೂ ಒಂದೇ ರೀತಿ ಇರುವುದಿಲ್ಲ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಧೈರ್ಯವಾಗಿ ಎದುರಿಸಬೇಕು ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.