ADVERTISEMENT

ಸೆಪ್ಟೆಂಬರ್ 13ರ ವರೆಗೆ ಒಡಿಶಾದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಪಿಟಿಐ
Published 10 ಸೆಪ್ಟೆಂಬರ್ 2022, 6:58 IST
Last Updated 10 ಸೆಪ್ಟೆಂಬರ್ 2022, 6:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಒಡಿಶಾದಲ್ಲಿ ಸೆಪ್ಟೆಂಬರ್ 13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಆಂಧ್ರ ಪ್ರದೇಶ ಹಾಗೂ ದಕ್ಷಿಣ ಒಡಿಶಾ ಕರಾವಳಿ ಪ್ರದೇಶದಲ್ಲಿ ಬಂಗಾಳ ಕೊಲ್ಲಿಯಲ್ಲಿ ಒತ್ತಡ ನಿರ್ಮಾಣವಾಗಿದೆ ಎಂದು ಇಲಾಖೆ ಹೇಳಿದೆ.

ಒಡಿಶಾದ ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ADVERTISEMENT

ಮಲ್ಕಾನ್‌ಗಿರಿ, ಕೊರಪೂರ್, ನಭಾರಂಗ್‌ಪುರ, ರಾಯಗಡ, ನಯಾಗಡ ಹಾಗೂ ಕಟಕ್‌ಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರುವಂತೆ ಆಯಾ ಜಿಲ್ಲಾ ಅಧಿಕಾರಿಗಳಿಗೆ ವಿಶೇಷ ಪರಿಹಾರ ಆಯುಕ್ತರು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.