ADVERTISEMENT

ಸಂಸದರು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆಂದು ಭಾವಿಸಿದ್ದೇನೆ: ಸ್ಪೀಕರ್‌

ಏಜೆನ್ಸೀಸ್
Published 13 ಸೆಪ್ಟೆಂಬರ್ 2020, 15:18 IST
Last Updated 13 ಸೆಪ್ಟೆಂಬರ್ 2020, 15:18 IST
ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ
ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ   

ನವದೆಹಲಿ: ಮುಂಬರುವ ಸಂಸತ್‌ ಅಧಿವೇಶನದಲ್ಲಿ ಎಲ್ಲ ಸಂಸದರು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆಂದು ಭಾವಿಸಿರುವುದಾಗಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ತಿಳಿಸಿದ್ದಾರೆ.

ಈ ವಿಚಾರವಾಗಿ ಎಎನ್‌ಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, 'ಈ ಬಿಕ್ಕಟ್ಟಿನ ಸಮಯದಲ್ಲೂ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆಯನ್ನು ಸದನದ ಸದಸ್ಯರು ತೆಗೆದುಕೊಂಡಿದ್ದಾರೆ. ಅಧಿವೇಶನದಲ್ಲಿ ಎಲ್ಲಾ ಸದಸ್ಯರು ಹಾಜರಿದ್ದು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ಬಿರ್ಲಾ ಹೇಳಿದ್ದಾರೆ.

ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸಂಸತ್‌ ಆವರಣದಲ್ಲಿ ಮಾಡಿದ ವ್ಯವಸ್ಥೆಗಳನ್ನು ಓಂ ಬಿರ್ಲಾ ಪರಿಶೀಲಿಸಿದ್ದಾರೆ. ಸಂಸತ್ತ ಅಧಿವೇಶನವು ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.