ADVERTISEMENT

ತೆಲಂಗಾಣ: ಎನ್‌ಕೌಂಟರ್‌ನಲ್ಲಿ ಮಾವೋವಾದಿ ಹತ

ಪಿಟಿಐ
Published 1 ಆಗಸ್ಟ್ 2021, 6:34 IST
Last Updated 1 ಆಗಸ್ಟ್ 2021, 6:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.

‘ಭದ್ರಾದ್ರಿ ಕೊಥಗುಡೆಮ್‌ ಪ್ರದೇಶದಲ್ಲಿ ಪೊಲೀಸರ ವಿಶೇಷ ಪಡೆಯು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಿಗ್ಗೆ 8.15ರ ಸುಮಾರಿಗೆ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಸದಸ್ಯರು ಮೊದಲು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪೊಲೀಸ್‌ ಸಿಬ್ಬಂದಿ ಪ್ರತ್ಯುತ್ತರ ನೀಡಿದ್ದಾರೆ. ಈ ವೇಳೆ ಒಬ್ಬ ಮಾವೋವಾದಿ ಮೃತಪಟ್ಟಿದ್ದಾನೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಮೃತ ಮಾವೋವಾದಿಯ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಒಂದು .303 ರೈಫಲ್‌ ಮತ್ತು ಎರಡು ಕಿಟ್‌ ಬ್ಯಾಗ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದ ಮಾವೋವಾದಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.