ADVERTISEMENT

ಜಮ್ಮು ಕಾಶ್ಮೀರ | ಬೆಳ್ಳಂಬೆಳಿಗ್ಗೆ ಗುಂಡಿನ ಚಕಮಕಿ, ಉಗ್ರನ ಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 1:20 IST
Last Updated 3 ಜೂನ್ 2019, 1:20 IST
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ. ಚಿತ್ರ: ಎಎನ್‌ಐ ಟ್ವೀಟ್
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ. ಚಿತ್ರ: ಎಎನ್‌ಐ ಟ್ವೀಟ್   

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಷೋಪಿಯನ್‌ ಜಿಲ್ಲೆಯ ಮೊಲು–ಚಿತ್ರಗಾಂ ಪ್ರದೇಶದಲ್ಲಿ ಸೋಮವಾರ ಬೆಳಗಿನಜಾವ ಭದ್ರತಾ ಪಡೆ ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿನಡೆದಿದ್ದು, ಒಬ್ಬ ಉಗ್ರ ಹತ್ಯೆಯಾಗಿದ್ದಾನೆ.

ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆ ಯೋಧರು ಉಗ್ರರಿಗಾಗಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ಟ್ವೀಟ್‌ ಮಾಡಿದೆ.

ರಕ್ಷಣಾ ಸಚಿವರ ಭೇಟಿ ದಿನವೇ ಘಟನೆ

ADVERTISEMENT

ನೂತನ ಕೇಂದ್ರ ಸರ್ಕಾರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದು ಕಾಶ್ಮೀರದ ಲಡಾಕ್‌ ಮತ್ತು ಸಿಯಾಚಿನ್‌ಗೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಕೆಲವೇ ಗಂಟೆಗಳ ಮೊದಲು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ರಾಜನಾಥ್‌ ಅವರು ಹುತಾತ್ಮ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ, ಸೇನಾ ಶಿಬಿರದಲ್ಲಿ ಯೋಧರ ಜತೆ ಸಂವಾದ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.