ADVERTISEMENT

ಸಂಘರ್ಷ ಶಮನ ಜಬ್ದಾರಿ ಭಾರತದ್ದು: ಚೀನಾ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 9:11 IST
Last Updated 17 ಸೆಪ್ಟೆಂಬರ್ 2020, 9:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ಧ ಸ್ಥಿತಿಯನ್ನು ಶಮನಗೊಳಿಸುವ ಜವಾಬ್ದಾರಿ ಭಾರತದ ಮೇಲಿದೆ ಎಂದು ಚೀನಾ ಬುಧವಾರ ಹೇಳಿದೆ.

ಗಡಿಯಲ್ಲಿ ಉದ್ಭವಿಸಿರುವ ಸಮಸ್ಯೆಗೆ ಸಂಬಂಧಿಸಿದಂತೆ ಉಭಯ ದೇಶಗಳ ವಿದೇಶಾಂಗ ಸಚಿವರಾದ ಎಸ್‌.ಜೈಶಂಕರ್‌ ಹಾಗೂ ವಾಂಗ್‌ ಯಿ ಅವರು ಮಾಸ್ಕೊದಲ್ಲಿ ಮಾತುಕತೆ ನಡೆಸಿ, ಐದಂಶಗಳ ಸೂತ್ರ ರಚಿಸಿ ವಾರದ ಬಳಿಕ ಚೀನಾದಿಂದ ಈ ಹೇಳಿಕೆ ಹೊರ ಬಿದ್ದಿದೆ.

‘ಗಡಿ ವಿಷಯದಲ್ಲಿ ಭಾರತದ ಸೇನೆ ತಾನು ಮಾಡಿರುವ ತಪ್ಪನ್ನು ತಿದ್ದುಕೊಳ್ಳಬೇಕು, ಪೀಪಲ್ಸ್‌ ಲಿಬರೇಷನ್‌ ಆರ್ಮಿ ಯೋಧರೊಂದಿಗೆ ಸಂಘರ್ಷ ನಡೆಸಿದ ಸ್ಥಳದಿಂದ ಸೇನೆಯನ್ನು ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಬೇಕು ಹಾಗೂ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಖಚಿತವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು‘ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್‌ ವೆನ್‌ಬಿನ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.