ADVERTISEMENT

Operation Ajay: ಇಸ್ರೇಲ್‌ನಿಂದ ತಾಯ್ನಾಡಿಗೆ ಮರಳಿದ 212 ಭಾರತೀಯರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2023, 1:44 IST
Last Updated 13 ಅಕ್ಟೋಬರ್ 2023, 1:44 IST
<div class="paragraphs"><p>ಚಿತ್ರ ಕೃಪೆ:&nbsp;X/@indemtel&nbsp;</p></div>

ಚಿತ್ರ ಕೃಪೆ: X/@indemtel 

   

ನವದೆಹಲಿ: ಆಪರೇಷನ್ ಅಜಯ್ ಕಾರ್ಯಾಚರಣೆಯ ಅಡಿಯಲ್ಲಿ ಇಸ್ರೇಲ್‌ನಿಂದ ಹೊರಟ ಮೊದಲ ವಿಮಾನದಲ್ಲಿ 212 ಮಂದಿ ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ.

ಇಸ್ರೇಲ್‌ನಿಂದ ಹೊರಟ ವಿಮಾನವು ಶುಕ್ರವಾರ ಬೆಳಿಗ್ಗೆ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದೆ.

ADVERTISEMENT

ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪ್ರಯಾಣಿಕರನ್ನು ಬರಮಾಡಿಕೊಂಡರು.

ಆಪರೇಷನ್ ಅಜಯ್...

ಇಸ್ರೇಲ್‌ನ‌ಲ್ಲಿ ಸಿಲುಕಿರುವ 18 ಸಾವಿರ ಭಾರತೀಯರು ತಾಯ್ನಾಡಿಗೆ ಮರಳುವುದಕ್ಕೆ ಅನುಕೂಲ ಮಾಡಿಕೊಡುವುದಕ್ಕಾಗಿ ‘ಆಪರೇಷನ್‌ ಅಜಯ್’ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಬುಧವಾರ ಘೋಷಿಸಿದ್ದರು.

ಇದರಂತೆ ಭಾರತೀಯರ ಮೊದಲ ತಂಡವನ್ನು ಹೊತ್ತ ವಿಶೇಷ ವಿಮಾನ ಶುಕ್ರವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.