ನರೇಂದ್ರ ಮೋದಿ, ಭಾರತ ಪ್ರಧಾನಿ
– ರಾಯಿಟರ್ಸ್ ಚಿತ್ರ
ಭೋಪಾಲ್ (ಮಧ್ಯಪ್ರದೇಶದ): ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ಸೈನಿಕರು ಕ್ಷಣ ಮಾತ್ರದಲ್ಲಿ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದರು ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಧಾರ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 'ದೇಶದ ಭದ್ರತೆಯು ಅತ್ಯುನ್ನತ ಆದ್ಯತೆಯಾಗಿದೆ. ಪಾಕಿಸ್ತಾನದಿಂದ ಬಂದ ಭಯೋತ್ಪಾದಕರು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರ ಘನತೆಯನ್ನು ಹಾಳುಮಾಡಲು ಪ್ರಯತ್ನಿಸಿದರು. ಸಹೋದರಿಯರ ಕುಂಕುಮವನ್ನು ದುಷ್ಟರು ಅಳಿಸಿ ಹಾಕಿದರು. ಇದಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿ ತಕ್ಕ ಉತ್ತರ ನೀಡಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕರ ಅಡಗು ತಾಣಗಳನ್ನು ಉಡಾಯಿಸಿದ್ದೇವೆ. ಈ ವೇಳೆ ಅನೇಕ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದೇವೆ. ನಮ್ಮ ಸೈನಿಕರು ಕಣ್ಣು ಮಿಟುಕಿಸುವುದರೊಳಗೆ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದರು ಎಂದು ಮೋದಿ ತಿಳಿಸಿದ್ದಾರೆ.
ಇದೇ ವೇಳೆ ಮಹಿಳೆಯರ ಆರೋಗ್ಯ ಸೇವೆಗಳನ್ನು ಹೆಚ್ಚಿಸುವ ಮತ್ತು ಪೌಷ್ಟಿಕಾಂಶವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8 ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಮೋದಿ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.