ಇರಾನ್ನಿಂದ ಭಾರತೀಯರ ವಾಪಸ್
(ಚಿತ್ರ ಕೃಪೆ: X/@MEAIndia)
ನವದೆಹಲಿ: 'ಆಪರೇಷನ್ ಸಿಂಧೂ' ಕಾರ್ಯಾಚರಣೆ ಮೂಲಕ ಇರಾನ್ನಿಂದ ಈವರೆಗೂ 1,713 ಭಾರತೀಯರನ್ನು ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.
'ಆಪರೇಷನ್ ಸಿಂಧೂ ಮೂಲಕ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುವ ಕಾರ್ಯಾಚರಣೆ ಮುಂದುವರಿದಿದೆ' ಎಂದು ತಿಳಿಸಿದ್ದಾರೆ.
'ಜೂನ್ 22, ಭಾನುವಾರ ರಾತ್ರಿ 11.30ಕ್ಕೆ ವಿಶೇಷ ವಿಮಾನವು ಮಶ್ಹದ್ನಿಂದ ನವದೆಹಲಿಗೆ ಬಂದಿಳಿಯಿತು. ಈ ವಿಮಾನದಲ್ಲಿ 285 ಭಾರತೀಯ ಪ್ರಜೆಗಳು ಇರಾನ್ನಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
'ಇದರೊಂದಿಗೆ ಈವರೆಗೆ 1,713 ಭಾರತೀಯ ಪ್ರಜೆಗಳನ್ನು ಇರಾನ್ನಿಂದ ಕರೆತರಲಾಗಿದೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.