ಭಾರತೀಯರ ವಾಪಸ್
ಚಿತ್ರ ಕೃಪೆ: X/@MEAIndia
ನವದೆಹಲಿ: 'ಆಪರೇಷನ್ ಸಿಂಧೂ' ಕಾರ್ಯಾಚರಣೆ ಮೂಲಕ ಇರಾನ್ನಿಂದ ಈವರೆಗೂ 3,426 ಭಾರತೀಯರನ್ನು ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.
'ಬುಧವಾರ ಮಧ್ಯರಾತ್ರಿ 12ಕ್ಕೆ ವಿಶೇಷ ವಿಮಾನವು ಮಶ್ಹದ್ನಿಂದ ನವದೆಹಲಿಗೆ ಬಂದಿಳಿಯಿತು. ಈ ವಿಮಾನದಲ್ಲಿ 271 ಭಾರತೀಯ ಪ್ರಜೆಗಳು ಇರಾನ್ನಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
'ಇದರೊಂದಿಗೆ ಈವರೆಗೆ 3,426 ಭಾರತೀಯ ಪ್ರಜೆಗಳನ್ನು ಇರಾನ್ನಿಂದ ಕರೆತರಲಾಗಿದೆ' ಎಂದು ಹೇಳಿದ್ದಾರೆ.
ನೇಪಾಳದ ಮೂವರು ವಾಪಸ್...
ಈ ವಿಶೇಷ ವಿಮಾನದಲ್ಲಿ ಸಂಘರ್ಷಪೀಡಿತ ಇರಾನ್ನಿಂದ ನೇಪಾಳದ ಮೂವರು ಪ್ರಜೆಗಳನ್ನು ಕರೆತರಲಾಗಿದೆ ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.