ADVERTISEMENT

ಸೇನೆಯು ಸದಾ ಸನ್ನದ್ಧ ಸ್ಥಿತಿಯಲ್ಲಿರಲಿ: ರಾಜನಾಥ್ ಸಿಂಗ್‌

ಪಿಟಿಐ
Published 9 ನವೆಂಬರ್ 2022, 14:06 IST
Last Updated 9 ನವೆಂಬರ್ 2022, 14:06 IST
ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌   

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ದೀರ್ಘಕಾಲದಿಂದ ಗಡಿ ಬಿಕ್ಕಟ್ಟು ಇರುವ ಕಾರಣ ಸೇನೆಯನ್ನು ಸದಾ ಕಾರ್ಯಾಚರಣೆಗೆ ಸನ್ನದ್ಧವಾಗಿರಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಬುಧವಾರ ಸೇನೆಯ ಉನ್ನತ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ.

ಇಲ್ಲಿ ಹಮ್ಮಿಕೊಂಡಿದ್ದ ಐದು ದಿನಗಳ ದ್ವೈವಾರ್ಷಿಕ ಸಮಾವೇಶದಲ್ಲಿ ಕಮಾಂಡರ್‌ಗಳ ಜೊತೆ ಸಂವಾದ ನಡೆಸಿದ ಸಚಿವರು,‘ಭಾರತೀಯ ಸೇನೆ ಮತ್ತು ಅದರ ನಾಯಕತ್ವದಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ’ ಎಂದೂ ಹೇಳಿದ್ದಾರೆ.

ಸಮಾವೇಶದಲ್ಲಿ ದೇಶದ ಭದ್ರತೆಯ ಸವಾಲುಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.