ADVERTISEMENT

ಅಗ್ನಿಪಥಕ್ಕೆ ವಿರೋಧ: ಕಾಂಗ್ರೆಸ್‌ ಶಾಸಕ, ಸಂಸದರಿಂದ ಜೂ.27ಕ್ಕೆ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 13:12 IST
Last Updated 22 ಜೂನ್ 2022, 13:12 IST
ದೆಹಲಿಯಲ್ಲಿ ಬುಧವಾರ ಸತ್ಯಾಗ್ರಹದ ವೇಳೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದ ಕೆ.ಸಿ.ವೇಣುಗೋಪಾಲ್‌ | ಪಿಟಿಐ ಚಿತ್ರ
ದೆಹಲಿಯಲ್ಲಿ ಬುಧವಾರ ಸತ್ಯಾಗ್ರಹದ ವೇಳೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದ ಕೆ.ಸಿ.ವೇಣುಗೋಪಾಲ್‌ | ಪಿಟಿಐ ಚಿತ್ರ   

ಬೆಂಗಳೂರು: ಅಲ್ಪಾವಧಿ ಸೇನಾ ನೇಮಕಾತಿ ಯೋಜನೆ ಅಗ್ನಿಪಥವನ್ನು ವಿರೋಧಿಸಿ ರಾಷ್ಟ್ರದಾದ್ಯಂತ ಜೂನ್‌ 27ರಂದು ಶಾಂತಿಯುತ ಸತ್ಯಾಗ್ರಹಕ್ಕೆ ಕಾಂಗ್ರೆಸ್‌ ಮುಂದಾಗಿದೆ.

ಈ ಕುರಿತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಟ್ವೀಟ್‌ ಮಾಡಿದ್ದಾರೆ. ಕಾಂಗ್ರೆಸ್‌ನ ಶಾಸಕರು, ಸಂಸದರು ಮತ್ತು ಮುಖಂಡರ ನೇತೃತ್ವದಲ್ಲಿ ಆಯಾ ರಾಜ್ಯಗಳಲ್ಲಿ ಸೋಮವಾರ ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸತ್ಯಾಗ್ರಹ ನಡೆಯಲಿದೆ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.