ಭುವನೇಶ್ವರ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ತಪ್ಪು ಮಾಹಿತಿ ಹರಡುತ್ತಿರುವುದರಿಂದ ದೇಶದಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಮಾತನಾಡಿರುವ ಅವರು, ’ಬಿಎಸ್ಪಿ, ಎಸ್ಪಿ, ಕಮ್ಯುನಿಷ್ಟ್ ಪಕ್ಷ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಸಿಎಎಯನ್ನು ವಿರೋಧಿಸುತ್ತಿವೆ. ಈ ಕಾಯ್ದೆಯಿಂದ ಅಲ್ಪಸಂಖ್ಯಾತರು ತಮ್ಮ ಪೌರತ್ವ ಕಳೆದುಕೊಳ್ಳಲಿದ್ದಾರೆಂದು ಅವರು ಹೇಳುತ್ತಿದ್ದಾರೆ. ಅವರೇಕೆ ಸುಳ್ಳಾಡುತ್ತಿದ್ದಾರೆ? ಸಿಎಎಯಿಂದ ಪೌರತ್ವ ಸಿಗಲಿದೆಯೇ ಹೊರತು ಯಾರ ಪೌರತ್ವವೂ ಹೋಗುವುದಿಲ್ಲ’ಎಂದು ತಿಳಿಸಿದ್ದಾರೆ.
ಇದೇ ವೇಳೆ ಭಾರತದ ಯಾವುದೇ ಮುಸ್ಲಿಮನೂ ಪೌರತ್ವ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
‘ಈ ಕಾಯ್ದೆಯಿಂದ ಭಾರತದ ಒಬ್ಬನೇ ಒಬ್ಬ ಮುಸ್ಲಿಮನೂ ಪೌರತ್ವ ಕಳೆದುಕೊಳ್ಳುವುದಿಲ್ಲ. ಈ ವಿಚಾರವನ್ನು ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ‘ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.