ADVERTISEMENT

ಕ್ರಿಮಿನಲ್‌ಗಳಿಗೆ ಭಯವೇ ಇಲ್ಲವಾಗಿದೆ: ಮಾಯಾವತಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 12:44 IST
Last Updated 15 ಸೆಪ್ಟೆಂಬರ್ 2022, 12:44 IST
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ   

ಲಖೀಂಪುರ ಖೇರಿ: ಸಾಮೂಹಿಕ ಅತ್ಯಾಚಾರ, ಕೊಲೆ ನಡೆದಿರುವುದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿವೆ.

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ರಾಜ್ಯದಲ್ಲಿ ಕ್ರಿಮಿನಲ್‌ಗಳಿಗೆ ಭಯವೇ ಇಲ್ಲವಾಗಿದೆ. ಸರ್ಕಾರದ ಆದ್ಯತೆಗಳು ತಪ್ಪಾಗಿರುವುದೇ ಇಂತಹ ಸ್ಥಿತಿಗೆ ಕಾರಣ ಎಂದು ಟೀಕಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಕೃತ್ಯ ಸಾಬೀತುಪಡಿಸಿದೆ. ಹಾತ್ರಾಸ್‌ ಸೇರಿದಂತೆ ಅನೇಕ ಪ್ರಕರಣಗಳನ್ನು ಮುಚ್ಚಿಹಾಕುವ ಯತ್ನವೇ ಇದಕ್ಕೆ ಕಾರಣ. ಪರಿಸ್ಥಿತಿ ಸುಧಾರಿಸಲು ಸರ್ಕಾರ ಕ್ರಮವಹಿಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್‌ ಮೌರ್ಯ ಮತ್ತು ಬ್ರಜೇಶ್ ಪಾಠಕ್‌ ಅವರು, ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಜರುಗಿಸುವ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.