ADVERTISEMENT

ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ವಾಪಸಾದ 212 ಮೈತೇಯಿಗಳು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 21:27 IST
Last Updated 18 ಆಗಸ್ಟ್ 2023, 21:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಂಫಾಲ್‌: ಮಣಿಪುರದಲ್ಲಿ ಜನಾಂಗೀಯ ಸಂಘರ್ಷದಿಂದ ಪಾರಾಗಲು ನೆರೆಯ ಮ್ಯಾನ್ಮಾರ್‌ ಗಡಿ ಪ್ರವೇಶಿಸಿದ್ದ ಮೈತೇಯಿ ಸಮುದಾಯದ 212 ಜನರು, ಮೂರು ತಿಂಗಳ ಬಳಿಕ ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಶುಕ್ರವಾರ ಹೇಳಿದ್ದಾರೆ.

ಇವರನ್ನು ಕರೆತರುವಲ್ಲಿ ಭಾರತೀಯ ಸೇನೆ ಮಹತ್ವದ ಪಾತ್ರ ನಿರ್ವಹಿಸಿದೆ ಎಂದು ಅವರು ‘ಎಕ್ಸ್‌’ನಲ್ಲಿ ಬರೆದಿದ್ದಾರೆ.

ಮಣಿಪುರದ ಮೊರೆಹ್‌ ಪಟ್ಟಣದಲ್ಲಿ ಮೇ 3ರಂದು ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಮೈತೇಯಿಯ 212 ಜನರು ಸುರಕ್ಷತೆ ಬಯಸಿ ಮ್ಯಾನ್ಮಾರ್‌ ಗಡಿ ಪ್ರವೇಶಿಸಿದ್ದರು. ಇದೀಗ ಅವರು ಭಾರತದ ನೆಲಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ADVERTISEMENT

ಮಣಿಪುರದಲ್ಲಿ ಮೇ 3ರಿಂದ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯದವರ ನಡುವಿನ ಘರ್ಷಣೆಯಲ್ಲಿ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.