ನವದೆಹಲಿ:ದೆಹಲಿಯ ಜನರು ಬಿಜೆಪಿ ಮುಂದಿಟ್ಟ ಕೋಮು ಧ್ರುವೀಕರಣ, ವಿಭಜನೆ ಮತ್ತು ಅಪಾಯಕಾರಿ ವಿಚಾರಗಳನ್ನು ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.
‘ಆಪ್ ಗೆಲುವು ಸಾಧಿಸಿದೆ. ಮೋಹಕ ಮಾತುಗಳಿಂದ ಭ್ರಮೆ ಸೃಷ್ಟಿಸುವವರು ಸೋತಿದ್ದಾರೆ. ದೇಶದ ಎಲ್ಲ ಭಾಗಗಳನ್ನು ಪ್ರತಿನಿಧಿಸುವ ದೆಹಲಿಯ ಜನರು ಬಿಜೆಪಿ ಪ್ರತಿಪಾದಿಸುವ ಕೋಮು ಧ್ರುವೀಕರಣ, ವಿಭಜನೆ ಮತ್ತು ಅಪಾಯಕಾರಿ ಅಜೆಂಡಾಗಳನ್ನು ತಿರಸ್ಕರಿಸಿದ್ದಾರೆ’ ಎಂದು ಚಿದಂಬರಂ ಹೇಳಿದ್ದಾರೆ.
‘2021 ಮತ್ತು 2022ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯಗಳಿಗೆ ದೆಹಲಿಯ ಜನರು ಒಂದೊಳ್ಳೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ’ ಎಂದು ಚಿದಂಬರಂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.