ADVERTISEMENT

ಗಡಿಯಲ್ಲಿ ಪಾಕ್‌ನಿಂದ ಸತತ ಮೂರನೇ ದಿನವೂ ಕದನ ವಿರಾಮ ಉಲ್ಲಂಘನೆ

ಪಿಟಿಐ
Published 27 ಏಪ್ರಿಲ್ 2025, 2:51 IST
Last Updated 27 ಏಪ್ರಿಲ್ 2025, 2:51 IST
<div class="paragraphs"><p>ಗಡಿ ನಿಯಂತ್ರಣ ರೇಖೆ</p></div>

ಗಡಿ ನಿಯಂತ್ರಣ ರೇಖೆ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮ ನಿಯಮ ಉಲ್ಲಂಘಿಸಿರುವ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು (ಭಾನುವಾರ) ತಿಳಿಸಿದ್ದಾರೆ.

ಪಾಕ್‌ನ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ತಕ್ಕ ರೀತಿಯಲ್ಲಿ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಸತತ ಮೂರನೇ ದಿನದ ರಾತ್ರಿಯಲ್ಲೂ ಪಾಕ್‌ನಿಂದ ಅಪ್ರಚೋದಿತ ದಾಳಿ ನಡೆದಿದೆ. ತುತ್ಮರಿ ಗಾಲಿ ಹಾಗೂ ರಾಂಪುರ ಸೆಕ್ಟರ್‌ಗಳಲ್ಲಿ ಪಾಕ್‌ ಗುಂಡಿನ ದಾಳಿ ನಡೆಸಿದೆ.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.