ADVERTISEMENT

Pahalgam Terror Attack | ಪಾಕಿಸ್ತಾನ ಪರ ಸಮರ್ಥನೆ: 39 ಮಂದಿ ಬಂಧನ

ಪಿಟಿಐ
Published 4 ಮೇ 2025, 8:08 IST
Last Updated 4 ಮೇ 2025, 8:08 IST
<div class="paragraphs"><p>ಬಂಧನ </p></div>

ಬಂಧನ

   

ಗುವಾಹಟಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡ ಆರೋಪದಡಿ ಅಸ್ಸಾಂನ 39 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಶರ್ಮಾ, ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಸರ್ಮರ್ಥಿಸಿಕೊಂಡ ಆರೋಪದಡಿ ಇದುವರೆಗೂ 39 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದ ಅವರು, ವಿಶ್ವದ ಎಲ್ಲೆಡೆ ಅಡಗಿರುವ ಪಾಕಿಸ್ತಾನಿ ಭಯೋತ್ಪಾದಕರನ್ನು ನ್ಯಾಯದ ಕಟಕಟ್ಟೆಗೆ ತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆಗೆ ಮತ್ತಷ್ಟು ಬಲ ಸಿಗುವಂತೆ ಪ್ರಾರ್ಥಿಸಲು ಶರ್ಮಾ ಜನರ ಬಳಿ ಮನವಿ ಮಾಡಿದ್ದರು.

ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನ ಮತ್ತು ಅದರ ಸಹಭಾಗಿತ್ವವನ್ನು ಭಾರತದ ನೆಲದಲ್ಲಿ ಸಮರ್ಥಿಸಿಕೊಂಡ ಆರೋಪದಡಿ ಬಂಧಿತರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದೆ. ಅಗತ್ಯವಿದ್ದಲ್ಲಿ ಬಂಧಿತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು ಎಂದೂ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಮಂದಿ ಮೃತಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.