ಜಮ್ಮು : ಗ್ರಾಮಸ್ಥರು ಹಾಗೂ ಭದ್ರತಾಪಡೆಗಳನ್ನು ಗುರಿಯಾಗಿಸಿಕೊಂಡು ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಭಾರತದ ಯೋಧ ರೊಬ್ಬರು ಸಾವನ್ನಪ್ಪಿದ್ದಾರೆ.
ರಜೋರಿ ಜಿಲ್ಲೆಯ ಸುಂದರಬನಿ ವಲಯದಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಭಾರತ ಸಹ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ವಲಯದಲ್ಲಿ ಮೂರು ದಿನಗಳಲ್ಲಿ ಎರಡನೇ ಬಾರಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸ ಲಾಗಿದೆ. ನಾಗರಿಕರು ಹಾಗೂ ಭಾರತ ಸೇನೆ ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆಯು ಬೆಳಗಿನ ಸಮಯದಲ್ಲಿಯೇ ದಾಳಿ ಮಾಡುತ್ತಿದೆ ಎಂದು ಸೇನಾಪಡೆ ವಕ್ತಾರರು ಈ ಹಿಂದೆಯೇ ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.