ಜಮ್ಮು: ಕಥುವಾ ಜಿಲ್ಲೆಯ ಹಿರಾನಗರ ವಲಯದ ಅಂತರರಾಷ್ಟ್ರೀಯ ಗಡಿ ಬಳಿಯಿರುವ ಔಟ್ಪೋಸ್ಟ್ಗಳ ಮೇಲೆ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.
ಕರೋಲ್ ಕೃಷ್ಣ, ಪನ್ಸಾರ್ ಮತ್ತು ಗುರ್ಣಂ ಔಟ್ಪೋಸ್ಟ್ಗಳ ಮೇಲೆ ಪಾಕಿಸ್ತಾನ ಸೇನೆಯು ಗುಂಡಿನ ದಾಳಿ ನಡೆಸಿದ್ದು,ಇದಕ್ಕೆ ಗಡಿ ಭದ್ರತಾ ಪಡೆಯು ಪ್ರತಿದಾಳಿ ನಡೆಸಿದೆ. ಮಂಗಳವಾರ ರಾತ್ರಿ 9.50 ರ ಸುಮಾರಿಗೆ ಆರಂಭವಾದ ಗುಂಡಿನ ಚಕಮಕಿಯು ಬುಧವಾರ ಮುಂಜಾನೆ 4 ಗಂಟೆಯವರೆಗೆ ಮುಂದುವರಿಯಿತು ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.