ADVERTISEMENT

ಪಾಕ್‌ನಿಂದ ಅಪ್ರಚೋದಿತ ದಾಳಿ

ಪಿಟಿಐ
Published 14 ಜೂನ್ 2020, 8:10 IST
Last Updated 14 ಜೂನ್ 2020, 8:10 IST

ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರಾಂಪುರ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನದ ಸೇನೆ, ಗುಂಡಿನ ದಾಳಿ ನಡೆಸಿದೆ.

ಪಾಕಿಸ್ತಾನಕ್ಕೆ ಭಾರತೀಯ ಯೋಧರು ಸಹ ಪ್ರತ್ಯುತ್ತರ ನೀಡಿದರು ಎಂದು ರಕ್ಷಣಾ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ಭಾನುವಾರ ತಿಳಿಸಿದ್ದಾರೆ.

ರಾಂಪುರ ಸೆಕ್ಟರ್‌ನಲ್ಲಿ ಎರಡನೇ ಹಾಗೂ ಕಾಶ್ಮೀರದ ಉತ್ತರ ಭಾಗದಲ್ಲಿ ಇದು ಮೂರನೇ ಕದನ ವಿರಾಮ ಉಲ್ಲಂಘನೆಯಾಗಿದೆ. ಭಾನುವಾರ ಬೆಳಿಗ್ಗೆ ಅಪ್ರಚೋದಿತ ದಾಳಿ ನಡೆಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.