ADVERTISEMENT

ಪಾಕ್‌ ದಾಳಿ: ಯೋಧ ಹುತಾತ್ಮ

ಪಿಟಿಐ
Published 18 ಮಾರ್ಚ್ 2019, 18:26 IST
Last Updated 18 ಮಾರ್ಚ್ 2019, 18:26 IST

ಜಮ್ಮು: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಸೋಮವಾರ ನಡೆಸಿದ ಗುಂಡಿನ ದಾಳಿಯಲ್ಲಿ ಯೋಧ ಹುತಾತ್ಮನಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ರಜೋರಿ ಜಿಲ್ಲೆ ಸುಂದರಬನಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಪಾಕಿಸ್ತಾನದ ಪಡೆಗಳು ಶೆಲ್‌ ದಾಳಿ ನಡೆಸಿವೆ ಎಂದು ರಕ್ಷಣಾ ಪಡೆಯ ವಕ್ತಾರರು ತಿಳಿಸಿದ್ದಾರೆ.

ಭಾರತದ ಯೋಧರು ಪ್ರತಿ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಕರಮ್‌ಜೀತ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರು ಸಾವನ್ನಪ್ಪಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.