ADVERTISEMENT

ಶ್ರೀನಗರ: ಪಾಕಿಸ್ತಾನಿ ನುಸುಳುಕೋರನ ಬಂಧನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 9:43 IST
Last Updated 21 ಮಾರ್ಚ್ 2021, 9:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರರನ್ನು ಬಂಧಿಸಲಾಗಿದೆ’ ಎಂದು ಬಿಎಸ್ಎಫ್ ವಕ್ತಾರರು ಭಾನುವಾರ ತಿಳಿಸಿದರು.

‘ಶನಿವಾರ ರಾತ್ರಿ ಬಿಎಸ್‌ಎಫ್‌ ಸಿಬ್ಬಂದಿ ಅಂತರರಾಷ್ಟ್ರೀಯ ಗಡಿ ಬಳಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ್ದಾರೆ. ಪಾಕಿಸ್ತಾನದ ನುಸುಳುಕೋರ ಭಾರತದ ಗಡಿಯೊಳಗೆ ಪ್ರವೇಶಿಸಿದ ಕೆಲವೇ ಸಮಯದ ಬಳಿಕ ಆತನನ್ನು ಬಂಧಿಸಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.