ಮುಂಬೈ: ಬಿಜೆಪಿಯನ್ನು ಟೀಕಿಸುವ ಭರದಲ್ಲಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪಾಕಿಸ್ತಾನದ ಗುಣಗಾನ ಮಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಪಕ್ಷದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ಜನರು ಸಂತೋಷವಾಗಿಲ್ಲ, ಅವರ ದೇಶದಲ್ಲೇ ಅವರಿಗೆ ಅನ್ಯಾಯವಾಗುತ್ತಿದೆ ಎಂದೆಲ್ಲ ಇಲ್ಲಿ ಪ್ರಚಾರ ಮಾಡಲಾಗುತ್ತಿದೆ. ಪಾಕಿಸ್ತಾನದ ವಾಸ್ತವ ಸ್ಥಿತಿಅರಿಯದವರು ಮಾಡುವ ಇಂಥ ಟೀಕೆಗಳ ಹಿಂದೆ ರಾಜಕೀಯ ಲಾಭ ಪಡೆಯುವ ಉದ್ದೇಶವಿರುತ್ತದೆ. ಬಿಜೆಪಿಯವರು ಪಾಕ್ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ’ ಎಂದರು.
‘ನಾನು ಹಲವು ಬಾರಿ ಪಾಕಿಸ್ತಾನಕ್ಕೆ ಭೇಟಿನೀಡಿದ್ದೇನೆ. ಭಾರತದಿಂದ ಬರುವ ಎಲ್ಲರನ್ನೂ ಅವರು ತಮ್ಮ ಸಂಬಂಧಿ ಎಂಬಂತೆ ಉಪಚರಿಸುತ್ತಾರೆ’ ಎಂದು ಪವಾರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.