ಚಂಡಿಗಡ: ಮಾಜಿ ಶಾಸಕರಿಗೆ ಸರ್ಕಾರ ನೀಡುವ ಪಿಂಚಣಿ ಬೇಡ ಎಂದುಶಿರೋಮಣಿ ಅಕಾಲಿದಳದ ಹಿರಿಯ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಅವರು ಗುರುವಾರ ತಿಳಿಸಿದ್ದಾರೆ. ಪಿಂಚಣಿ ಹಣವನ್ನು ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.ಬಾದಲ್ ಅವರ ಹೇಳಿಕೆಯನ್ನು ಅಕಾಲಿದಳ ಟ್ವೀಟ್ ಮಾಡಿದೆ.
ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಬಾದಲ್ ಅವರು ಲಂಬಿ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಗುರ್ಮೀತ್ ಸಿಂಗ್ ಖುದ್ದಿಯನ್ ವಿರುದ್ಧ ಪರಾಭವಗೊಂಡಿದ್ದಾರೆ. ಬಾದಲ್ ಅರು 11 ಬಾರಿ ಶಾಸಕರಾಗಿ ಚುನಾಯಿತರಾಗಿದ್ದಾರೆ. 1957ರಲ್ಲಿ ಅವರು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.