ADVERTISEMENT

ಕಡಲ್ಗಳ್ಳತನ ತಡೆ ಮಸೂದೆಗೆ ಅಸ್ತು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2022, 22:00 IST
Last Updated 21 ಡಿಸೆಂಬರ್ 2022, 22:00 IST
   

ನವದೆಹಲಿ: ‘ಕಡಲ್ಗಳ್ಳತನ ತಡೆ ಮಸೂದೆಗೆ ಸಂಸತ್ತು ಬುಧವಾರ ಅಂಗೀಕಾರ ನೀಡಿದೆ. ಕಡಲ್ಗಳ್ಳತನದಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಈ ಮಸೂದೆ ಅವಕಾಶ ಕಲ್ಪಿಸುತ್ತದೆ.

ರಾಜ್ಯಸಭೆಯಲ್ಲಿ ಮಂಡನೆಯಾದ ಈ ಮಸೂದೆಗೆ ಧ್ವನಿಮತದ ಅಂಗೀಕಾರ ದೊರೆಯಿತು. ಲೋಕಸಭೆಯಲ್ಲಿ ಸೋಮ ವಾರವೇ ಅನುಮೋದನೆ ದೊರೆತಿತ್ತು.

ಅಪರಾಧಿಗಳಿಗೆ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ನಿಬಂಧನೆ ಈ ಮಸೂದೆಯಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.