ADVERTISEMENT

ಸಂಸತ್‌ ಭದ್ರತಾ ಲೋಪ ಪ್ರಕರಣ: ನೀಲಂ ಜಾಮೀನು ಅರ್ಜಿ ವಜಾ

ಪಿಟಿಐ
Published 18 ಜನವರಿ 2024, 14:47 IST
Last Updated 18 ಜನವರಿ 2024, 14:47 IST
ನ್ಯಾಯ
ನ್ಯಾಯ   

ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದ ಆರೋಪಿ ನೀಲಂ ಆಜಾದ್‌ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ.

‘ಈ ಹಂತದಲ್ಲಿ ನೀಲಂ ಅವರಿಗೆ ಜಾಮೀನು ಮಂಜೂರು ಮಾಡುವುದು ಸರಿಯಲ್ಲ’ ಎಂದಿರುವ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರಾದ ಹರ್‌ದೀಪ್‌ ಕೌರ್ ಅವರು ಅರ್ಜಿಯನ್ನು ತಳ್ಳಿಹಾಕಿದ್ದಾರೆ.

ನೀಲಂ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ನ್ಯಾ‌ಯಾಲ‌ಯವು ಈಚೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.