ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಮುಂದಿನ ಎಂಟು ದಿನಗಳ ಕಾಲ ವಿಸ್ತರಿಸಿದೆ.
ಇದೇ ವೇಳೆ ಅರೋಪಿಗಳಾದ ಲಲಿತ್ ಝಾ, ಮಹೇಶ್ ಕುಮಾವತ್ ಹಾಗೂ ಅಮೋಲ್ ಶಿಂಧೆ ಸುಳ್ಳುಪತ್ತೆ ಪರೀಕ್ಷೆಗೆ ಅನುಮತಿ ನೀಡಿದ್ದಾರೆ.
ಸಾಗರ್ ಶರ್ಮಾ ಹಾಗೂ ಮೈಸೂರಿನ ಮನೋರಂಜನ್ ಅವರು ಸುಳ್ಳುಪತ್ತೆ, ನಾರ್ಕೋ ಅನಾಲಿಸಿಸ್, ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಅನುಮತಿ ನೀಡಿದ್ದಾರೆ. ಆದರೆ ಸುಳ್ಳುಪತ್ತೆ ಪರೀಕ್ಷೆಗೆ ಅನುಮತಿ ನೀಡಲು ನೀಲಂ ಆಜಾದ್ ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.