ADVERTISEMENT

ರಾಜ್ಯಸಭಾ ಸದಸ್ಯರ ಅಮಾನತು: ಸದನದಲ್ಲಿ ಮುಂದುವರಿದ ಗದ್ದಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2021, 8:37 IST
Last Updated 2 ಡಿಸೆಂಬರ್ 2021, 8:37 IST
ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟಿಸುತ್ತಿರುವ ವಿರೋಧ ಪಕ್ಷಗಳ ನಾಯಕರು
ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟಿಸುತ್ತಿರುವ ವಿರೋಧ ಪಕ್ಷಗಳ ನಾಯಕರು   

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷಗಳ 12 ಸದಸ್ಯರಅಮಾನತನ್ನು ಖಂಡಿಸಿಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಗುರುವಾರವೂ ಪ್ರತಿಭಟನೆ ನಡೆಸಿವೆ.

ಇದೇ ವೇಳೆ ಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯರುಕ್ಷಮೆಯಾಚಿಸಬೇಕು ಎಂದು ಕೇಂದ್ರ ಸರ್ಕಾರವು ಒತ್ತಾಯಿಸಿದೆ.

‘12 ಸದಸ್ಯರಅಮಾನತಿಗೆ ಸಂಬಂಧಿಸಿದ ವಿಚಾರದಲ್ಲಿ ಪ್ರತಿಪಕ್ಷಗಳ ನಾಯಕರು ಸದನದ ಘನತೆಯನ್ನು ಕುಗ್ಗಿಸಿರುವುದು ವಿಷಾದನೀಯ‘ ಎಂದು ರಾಜ್ಯಸಭೆಯ ಸಭಾನಾಯಕ ಪಿಯೂಷ್ ಗೋಯಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಾನತುಗೊಂಡಿರುವ ಸದಸ್ಯರುಸದನದ ಕ್ಷಮೆಯಾಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

ಇದೇ ವಿಚಾರವಾಗಿ ಪ್ರತಿಪಕ್ಷಗಳು ಮೇಲ್ಮನೆಯಲ್ಲಿಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.