ಮುಂಬೈ: ನಗರದಲ್ಲಿ ಸುರಿಯುತ್ತಿರುವ ಮಹಾ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ.
ನಗರದ ಪ್ರಮುಖ ಪ್ರದೇಶಗಳಾದ, ದಾದರ್, ಗಾಂಧಿ ಮಾರ್ಕೆಟ್, ಅಂದೇರಿ, ಕೊಲಬಾ, ಕುರ್ಲಾ, ಸಿಯಾನ್ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಹಾಗೂ ಸೋಮವಾರ ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊರೊನಾ ಸೋಂಕಿನಿಂದ ಈಗಾಗಲೇ ಸಮಸ್ಯೆಗೆ ಸಿಲುಕಿರುವ ಮುಂಬೈ ನಗರವು ಮಳೆಯಿಂದ ಮತ್ತೊಂದು ಅವಾಂತರಕ್ಕೆ ತೆರೆದುಕೊಂಡಂತಾಗಿದೆ.
ಜಲಾವೃತವಾಗಿರುವ ದಾದರ್ ಪ್ರದೇಶದ ರಸ್ತೆಗಳನ್ನು ಈ ವಿಡಿಯೊದಲ್ಲಿ ವಿಕ್ಷೀಸಬಹುದು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.