ಅಮೃತಸರ: ಕುಡಿದ ಮತ್ತಿನಲ್ಲಿ ಇಂಡಿಗೊ ವಿಮಾನದ ಮಹಿಳಾ ಸಿಬ್ಬಂದಿ ಜೊತೆಗೆ ತೀವ್ರ ವಾಗ್ವಾದ ನಡೆಸಿ ಆಕೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ನ ಜಲಂಧರ್ ಬಳಿಯ ಕೊಟ್ಲಿ ಗ್ರಾಮದ ರಾಜಿಂದರ್ ಸಿಂಗ್ ಬಂಧಿತ.
ಶಾರ್ಜಾ ಮತ್ತು ಅಮೃತಸರ ನಡುವೆ ಸಂಚರಿಸುತ್ತಿದ್ದ ವಿಮಾನದಲ್ಲಿ ಶನಿವಾರ ಈ ಘಟನೆ ನಡೆದಿದೆ. ಪ್ರಯಾಣಿಕನ ಅನುಚಿತ ವರ್ತನೆ ಬಗ್ಗೆ ಮಹಿಳೆಯು, ವಿಮಾನದಲ್ಲಿದ್ದ ಇತರ ಸಿಬ್ಬಂದಿಗೆ ತಿಳಿಸಿದ್ದರು. ಅವರು ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದ, ಸಹಾಯಕ ರಕ್ಷಣಾ ವ್ಯವಸ್ಥಾಪಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಶ್ರೀಗುರು ರಾಮದಾಸ್ ಜಿ ಏರ್ಪೋರ್ಟ್ನಲ್ಲಿ ವಿಮಾನ ನಿಲುಗಡೆಯಾದ ತಕ್ಷಣವೇ ಆರೋಪಿಯನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.