ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ವಿ. ವಿದ್ಯಾವತಿ ಅವರನ್ನು ಕರ್ನಾಟಕ ಸರ್ಕಾರವು, ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತೆಯನ್ನಾಗಿ ನೇಮಿಸಿದೆ.
ಪ್ರಸ್ತುತ ಈ ಹುದ್ದೆಯಲ್ಲಿರುವ ನಿಲಯ ಮಿತಾಶ್ ಅವರು ದೆಹಲಿಯಲ್ಲಿರುವ ಏಷ್ಯಾ ಅಭಿವೃದ್ಧಿ ಬ್ಯಾಂಕ್ನ (ಎಡಿಬಿ) ಪ್ರಾದೇಶಿಕ ಸಮನ್ವಯ ಅಧಿಕಾರಿ ಹುದ್ದೆಗೆ ನಿಯೋಜನೆಗೊಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
1991ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ವಿದ್ಯಾವತಿ ಅವರು ಪ್ರಸ್ತುತ ಅಧ್ಯಯನ ರಜೆಯಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.