ADVERTISEMENT

ಪಿ.ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 12:59 IST
Last Updated 21 ಆಗಸ್ಟ್ 2019, 12:59 IST
   

ನವದೆಹಲಿ:ಐಎನ್ಎಕ್ಸ್ ಮೀಡಿಯಾ ಹಗರಣದ ಪ್ರಮುಖ ಆರೋಪಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಸಲ್ಲಿಸಿರುವಜಾಮೀನು ಅರ್ಜಿ ವಿಚಾರಣೆಯನ್ನುಸುಪ್ರೀಂಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.

ಈ ಬೆಳವಣಿಗೆಯಿಂದಾಗಿ ಪಿ.ಚಿದಂಬರಂಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಎನ್.ವಿ. ರಮಣ ಅವರು ಬುಧವಾರ ಬೆಳಿಗ್ಗೆಯೇ ವಿಚಾರಣೆ ನಡೆಸಿದರೂ ತಾಂತ್ರಿಕ ಕಾರಣದಿಂದಾಗಿ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡುವುದಾಗಿ ತಿಳಿಸಿದ್ದರು.

ಆದರೆ, ಸುಪ್ರೀಂಕೋರ್ಟ್ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರಿದ್ದ ಸಾಂವಿಧಾನಿಕ ಪೀಠದಲ್ಲಿ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವುದರಿಂದ ಚಿದಂಬರಂ ಅವರ ಅರ್ಜಿಯ ಕುರಿತು ಬುಧವಾರ ಸಂಜೆಯವರೆಗೂ ಯಾವುದೇ ಅಭಿಪ್ರಾಯ ಹೇಳಿರಲಿಲ್ಲ. ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಸಂಜೆಯವರೆಗೂ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಈ ನಡುವೆನ್ಯಾಯಮೂರ್ತಿ ರಮಣ ಅವರಿದ್ದ ಪೀಠದ ವಿಚಾರಣೆ ಪಟ್ಟಿಯಲ್ಲಿ ಶುಕ್ರವಾರ ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಪ್ರಕಟಿಸಲಾಗಿದೆ.

ಈ ಬೆಳವಣಿಗೆಯಿಂದಾಗಿಚಿದಂಬರಂ ಅವರನ್ನುಶುಕ್ರವಾರದವರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಥವಾ ಸಿಬಿಐ ಬಂಧಿಸಬಹುದು, ಇಲ್ಲವೇ ವಿಚಾರಣೆಗೂ ಕರೆದೊಯ್ಯಬಹುದು.ಇದುವರೆಗೆ ಚಿದಂಬರಂ ಅವರು ತಲೆಮರೆಸಿಕೊಂಡಿದ್ದು, ಅವರ ಪರ ವಕೀಲ, ಕಾಂಗ್ರೆಸ್ ಮುಖಂಡಕಪಿಲ್ ಸಿಬಲ್ ಸುಪ್ರೀಮ್ ಕೋರ್ಟ್ನಲ್ಲಿವಾದ ಮಂಡಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.