ADVERTISEMENT

ಪುದುಚೇರಿ | ಮಾಜಿ ಮುಖ್ಯಮಂತ್ರಿ ಜಾನಕಿರಾಮನ್‌ ನಿಧನ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 13:54 IST
Last Updated 10 ಜೂನ್ 2019, 13:54 IST
ಜಾನಕಿರಾಮನ್‌
ಜಾನಕಿರಾಮನ್‌   

ಪುದುಚೇರಿ: ಡಿಎಂಕೆ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಆರ್‌.ವಿ. ಜಾನಕಿರಾಮನ್‌ (79) ಸೋಮವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತರ ಅಂತ್ಯಕ್ರಿಯೆ ಅವರ ಸ್ವಗ್ರಾಮ ವಿಲ್ಲಪುರಂ ಜಿಲ್ಲೆಯ ಅಲತ್ತೂರು ಗ್ರಾಮದಲ್ಲಿ ನಡೆಯಲಿದೆ.

ADVERTISEMENT

ಟ್ಯಾಕ್ಸಿ ಚಾಲಕರಾಗಿ ವೃತ್ತಿ ಬದುಕು ಆರಂಭಿಸಿದ ಅವರು,1985ರಲ್ಲಿನೆಲ್ಲಿಥೋಪ್‌ ವಿಧಾನ ಸಭಾಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದರು.

1996ರಿಂದ 2000ರ ಅವಧಿಯಲ್ಲಿ ಡಿಎಂಕೆ ಮತ್ತು ಟಿಎಂಸಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದರು.

ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಸೇರಿದಂತೆ ಗಣ್ಯರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.