ನವದೆಹಲಿ: ಪೆಗಾಸಸ್ ಗೂಢಚರ್ಯೆ ಕುರಿತು ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಿಪಿಎಂ ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
‘300 ಭಾರತೀಯರು ಗೂಢಚರ್ಯೆಯ ಗುರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಕಾರಣಿಗಳು, ಸಚಿವರು, ಪತ್ರಕರ್ತರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಚುನಾವಣಾ ಆಯುಕ್ತರ ಮೇಲೆ ಗೂಢಚರ್ಯೆ ನಡೆಸಲಾಗಿದೆ ಎನ್ನಲಾಗಿದೆ. ಇದು ಜನರ ಖಾಸಗಿತನದ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ. ಹೀಗಾಗಿ ತನಿಖೆಗೆ ಆದೇಶಿಸಿ’ ಎಂದು ಅವರು ಕೋರಿದ್ದಾರೆ.
ಇದನ್ನೂ ಓದಿ:ಪೆಗಾಸಸ್: ಸಂಸತ್ತಿನಲ್ಲಿ ಪ್ರಧಾನಿಯೇ ಸ್ಪಷ್ಟನೆ ನೀಡಲಿ- ಕಾಂಗ್ರೆಸ್ ನಾಯಕ ಚಿದಂಬರಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.