ADVERTISEMENT

ಕುಖ್ಯಾತ ರೌಡಿ ವಿಕಾಸ್‌ ದುಬೆ ಎನ್‌ಕೌಂಟರ್‌: ಹುಟ್ಟೂರಿನಲ್ಲಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 11:45 IST
Last Updated 10 ಜುಲೈ 2020, 11:45 IST
ಕುಖ್ಯಾತ ರೌಡಿ ವಿಕಾಸ್‌ ದುಬೆ ಮೃತಪಟ್ಟಿರುವುದಕ್ಕೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಜನ
ಕುಖ್ಯಾತ ರೌಡಿ ವಿಕಾಸ್‌ ದುಬೆ ಮೃತಪಟ್ಟಿರುವುದಕ್ಕೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಜನ   

ಕಾನ್ಪುರ: ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಕುಖ್ಯಾತ ರೌಡಿ ವಿಕಾಸ್‌ ದುಬೆ ಮೃತಪಟ್ಟಿರುವುದಕ್ಕೆ, ಅವನ ಹುಟ್ಟೂರಾದಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಗಿದೆ.

ಸುಮಾರು ಮೂವತ್ತು ವರ್ಷಗಳಿಂದ ಆತಂಕ ಸೃಷ್ಟಿಸಿದ್ದ ವಿಕಾಸ್‌ ದುಬೆ ಸಾವಿಗೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಹಿ ಹಂಚಿ ಸಂಭ್ರಮಿಸಿರುವ ಬಿಕ್ರು ಗ್ರಾಮಸ್ಥರು ಭಯದ ಯುಗವೊಂದು ಅಂತ್ಯವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ದುಬೆಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಈತ ಮತ್ತು ಈತನ ಸಹಚರರು ಗುಂಡಿನ ದಾಳಿ ನಡೆಸಿದ್ದರು. ಈ ದುರ್ಘಟನೆಯಲ್ಲಿ ಡಿವೈಎಸ್‌ಪಿ ಸೇರಿದಂತೆ ಎಂಟು ಪೊಲೀಸರು ಹತ್ಯೆಯಾಗಿದ್ದರು. ದುಬೆನನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈತನ ಬೆನ್ನು ಬಿದ್ದಿದ್ದ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ವಿಕಾಸ್‌ ದುಬೆಯನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.