ADVERTISEMENT

ಪಿಎಫ್‌ಐ ಕಾರ್ಯಕರ್ತನ ಹತ್ಯೆ

ಪಿಟಿಐ
Published 15 ಏಪ್ರಿಲ್ 2022, 12:51 IST
Last Updated 15 ಏಪ್ರಿಲ್ 2022, 12:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಾಲಕ್ಕಾಡ್‌, ಕೇರಳ (ಪಿಟಿಐ): ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಪ್ಯಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿಎಫ್‌ಐ) ಸ್ಥಳೀಯ ಕಾರ್ಯಕರ್ತ ಸುಬೈರ್‌ (43) ಎಂಬುವವರನ್ನು ಇರಿದು ಹತ್ಯೆ ಮಾಡಲಾಗಿದೆ.

‘ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದು ಸುಬೈರ್‌ನನ್ನು ಅಡ್ಡಗಟ್ಟಿದಹಂತಕರು ಹರಿತವಾದ ಕತ್ತಿಯಿಂದ ಇರಿದಿದ್ದಾರೆ. ಇದು ರಾಜಕೀಯ ಹತ್ಯೆ ಎಂದು ಆಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಹತ್ಯೆಯನ್ನು ಆರ್‌ಎಸ್‌ಎಸ್‌ ಮಾಡಿದೆ ಎಂದು ಪಿಎಫ್‌ಐ ಆರೋಪಿಸಿದೆ. ಆದರೆ ಈ ಆರೋಪಕ್ಕೆ ಆರ್‌ಎಸ್‌ಎಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.