ADVERTISEMENT

ವಲಸೆ ಕಾರ್ಮಿಕರಿಗೆ ಸೌಕರ್ಯ : ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್

​ಪ್ರಜಾವಾಣಿ ವಾರ್ತೆ
Published 21 ಮೇ 2020, 19:45 IST
Last Updated 21 ಮೇ 2020, 19:45 IST

ನವದೆಹಲಿ:ದೇಶದ ಹಲವೆಡೆ ಸಿಲುಕಿರುವ ವಲಸೆ ಕಾರ್ಮಿಕರಿಗೆ ವಾಹನಗಳ ಸೌಲಭ್ಯದ ಜೊತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲ ದೀಪಕ್ ಪ್ರಕಾಶ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ‘ಸೌಲಭ್ಯಗಳಿಲ್ಲದೇ ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ನ್ಯಾಯಾಲಯ ತಕ್ಷಣ ಮಧ್ಯ ಪ್ರವೇಶಿಸಬೇಕು’ ಎಂದು ಅವರು ಕೋರಿದ್ದಾರೆ.

‘ಕೆಲವು ರಾಜ್ಯಗಳ ಅಧಿಕಾರಿಗಳಲ್ಲಿ ಸಮನ್ವಯದ ತೀವ್ರ ಕೊರತೆಯಿರುವುದರಿಂದ ಸಂಕಷ್ಟಕ್ಕೆ ಈಡಾಗಿರುವ ಕಾರ್ಮಿಕರಿಗೆ ಪರಿಹಾರ ದೊರಕಿಸುವುದು ಸಾಧ್ಯವಾಗಿಲ್ಲ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.