ನವದೆಹಲಿ: ಕೋವಿಡ್ ಪರಿಸ್ಥಿತಿಯಿಂದಾಗಿ ಉದ್ದೇಶಿತ ಸೆಂಟ್ರಲ್ ವಿಸ್ತಾ ನಿರ್ಮಾಣ ಪ್ರಕ್ರಿಯೆ ನಿಲ್ಲಿಸಲು ನಿರ್ದೇಶನ ನೀಡಲು ಕೋರಿ ದೆಹಲಿ ಹೈಕೋರ್ಟ್ಗೆ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ಜಸ್ಮೀತ್ ಸಿಂಗ್ ಅವರಿದ್ದ ಪೀಠವು ಈ ಅರ್ಜಿಯನ್ನು ಸ್ವೀಕರಿಸಿದ್ದು, ಈ ಯೋಜನೆಗೆ ಅನುಮತಿ ನೀಡಿದ್ದ ಸುಪ್ರೀಂಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಮೊದಲಾಗಿ ಗಮನಿಸಬೇಕಿದೆ ಎಂದು ಹೇಳಿತು.ವಿಚಾರಣೆಯನ್ನು ಮೇ 17ಕ್ಕೆ ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.