ADVERTISEMENT

ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ ಸುರಕ್ಷತೆ ಕುರಿತು ಮೋದಿಗೆ ಪತ್ರ ಬರೆದ ವಿಜಯನ್

ಪಿಟಿಐ
Published 1 ಮಾರ್ಚ್ 2026, 9:35 IST
Last Updated 1 ಮಾರ್ಚ್ 2026, 9:35 IST
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್   

ತಿರುವನಂತಪುರ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿ ಬಳಿಕ ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಕೇರಳ ಮೂಲದವರು ಸೇರಿದಂತೆ ಭಾರತೀಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾಧ್ಯವಾದರೆ ಅವರನ್ನು ದೇಶಕ್ಕೆ ವಾ‍ಪಸ್‌ ಕರೆ ತರುವಂತೆ ಮನವಿ ಮಾಡಿದ್ದಾರೆ.

ಇರಾನ್ ಮೇಲಿನ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿಯು ಗಲ್ಫ್ ದೇಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ವಿಜಯನ್ ತಿಳಿಸಿದ್ದಾರೆ.

ADVERTISEMENT

ಸಹಾಯವಾಣಿಗಳನ್ನು ಸ್ಥಾಪಿಸುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಕೇರಳ ಸರ್ಕಾರ ಸಿದ್ಧವಿದೆ ಎಂದು ವಿಜಯನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.